ಶಿವಮೊಗ್ಗ: ಅಡಕೆ ಗೊನೆ ಕೊಯ್ಯುವಾಗ ವಿದ್ಯುತ್ ಪ್ರವಹಿಸಿ ಕೃಷಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಸವಾನಿ ಸಮೀಪದ ಲಕ್ಷ್ಮಿಪುರ ಗ್ರಾಮದ ಬಳಿ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ದೋರಗಲ್ಲು ಗ್ರಾಮದ ಸತೀಶ್(50) ಮೃತಪಟ್ಟವರು. ಅಡಕೆ ಗೊನೆ ಕೊಯ್ಯುವಾಗ ಆಕಸ್ಮಿಕವಾಗಿ ಕೊನೆಯ ದೋಟಿ ವಿದ್ಯುತ್ ಪೂರೈಕೆ ಮಾರ್ಗದ ತಂತಿಗೆ ತಗಲಿ ಸತೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರೈತ ಸುಂದರೇಶ್ ಅವರಿಗೆ ಸೇರಿದ ಅಡಕೆ ತೋಟದಲ್ಲಿ ಘಟನೆ ನಡೆದಿದೆ. ಮೃತ ಸತೀಶ್ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.
