BREAKING: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ, ಜಾನುವಾರು ಸಾವು

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಮತ್ತು ಜಾನುವಾರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ.

ಶೇಖರ್(45) ಮೃತಪಟ್ಟವರು ಎಂದು ಹೇಳಲಾಗಿದೆ. ಒಂದು ಜೊತೆ ಹಸು, ಒಂದು ಎತ್ತು ಕೂಡ ಸಾವನ್ನಪ್ಪಿವೆ. ವಿದ್ಯುತ್ ತಂತಿಗಳು ಹಳೆಯದಾಗಿದ್ದು, ಬದಲಾವಣೆ ಮಾಡುವಂತೆ ಗ್ರಾಮಸ್ಥರು ದೂರು ನೀಡಿದ್ದರು. ಆದರೆ ಚೆಸ್ಕಾಂ ಅಧಿಕಾರಿಗಳು ಬದಲಾಯಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾನುವಾರುಗಳನ್ನು ಮೇಯಿಸಿಕೊಂಡು ಮನೆಗೆ ಬರುತ್ತಿದ್ದ ಶೇಖರ್ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read