ಬಣವೆಗೆ ಬಿದ್ದ ಬೆಂಕಿ ನಂದಿಸಲು ಹೋಗಿ ರೈತ ಸಾವು

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಸೇವಾಲಾಲಪುರ ಗ್ರಾಮದಲ್ಲಿ ಬಣವೆಗೆ ಬಿದ್ದಿದ್ದ ಆಕಸ್ಮಿಕ ಬೆಂಕಿ ನಂದಿಸಲು ಹೋಗಿ ರೈತರೊಬ್ಬರು ಸಾವನ್ನಪ್ಪಿದ್ದಾರೆ.

ಗಂಗಪ್ಪ ಲಮಾಣಿ(74) ಮೃತಪಟ್ಟ ರೈತ. ಮಂಗಳವಾರ ಬೆಳಗ್ಗೆ ಮೇವಿನ ಬಣವೆಗೆ ಬೆಂಕಿ ಬಿದ್ದಿರುವುದನ್ನು ಗಮನಿಸಿದ ಅವರು ನಂದಿಸಲು ಹೋದ ವೇಳೆ ಬೆಂಕಿಯ ಜ್ವಾಲೆಯಿಂದ ತೀವ್ರ ಸುಟ್ಟ ಗಾಯಗಳೊಂದಿಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಶೇಂಗಾ ಹೊಟ್ಟಿನ ಬಣವೆ ಸುಟ್ಟು ಭಸ್ಮವಾಗಿದೆ. ಸವಣೂರು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read