ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಘೋರ ದುರಂತ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ, ಎತ್ತುಗಳು ಸಾವು

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬುಳ್ಳನದೊಡ್ಡಿ ಗ್ರಾಮದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಹಾಗೂ ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ನಡೆದಿದೆ.

ಮಾಲಗಾರಹಳ್ಳಿ ಗ್ರಾಮದ ರೈತ ಮುತ್ತುರಾಜ್(45) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿವಿನಲ್ಲಿ ಉಳುಮೆ ಮಾಡುವಾಗ ವಿದ್ಯುತ್ ಪ್ರವಹಿಸಿ ರೈತ ಸಾವನ್ನಪ್ಪಿದ್ದಾರೆ.

ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಮತ್ತು ಸೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read