ಕೃಷಿ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಇನ್ನು ಸಹಕಾರ ಸಂಘಗಳಿಂದ ಬಡ್ಡಿ ರಹಿತ ಅಲ್ಪಾವಧಿ ಬೆಳೆ ಸಾಲ ಕಷ್ಟ

ಬೆಂಗಳೂರು: ಅಲ್ಪಾವಧಿ ಕೃಷಿ ಸಾಲದ ಪುನರ್ಧನ ಮಿತಿಯನ್ನು ನಬಾರ್ಡ್ ಧಿಡೀರ್ ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದ್ದು, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಇದರಿಂದಾಗಿ ಅವಲಂಬಿತ ರೈತರಿಗೂ ಆಘಾತ ಎದುರಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನಬಾರ್ಡ್ ನಿಂದ 92,000 ಕೋಟಿ ರೂಪಾಯಿ ಬರುವ ನಿರೀಕ್ಷೆ ಇತ್ತು. ಆದರೆ, 2340 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ ಎಂದರು.

ಕಳೆದ ವರ್ಷದ 5,600 ಕೋಟಿ ರೂ.ಗೆ ಹೋಲಿಸಿದರೆ ಶೇಕಡ 58ರಷ್ಟು ಕಡಿಮೆಯಾಗಿದೆ. ಸಹಕಾರಿ ಸಂಸ್ಥೆಗಳಿಂದ ಬಡ್ಡಿ ರಹಿತ ಅಲ್ಪಾವಧಿ ಬೆಳೆ ಸಾಲ ನೀಡುವುದು ಕಷ್ಟವಾಗಲಿದ್ದು, ಕೃಷಿ ಮೇಲೆ ಅಡ್ಡ ಪರಿಣಾಮ ಉಂಟಾಗುತ್ತದೆ. ಆಹಾರಧಾನ್ಯ ಉತ್ಪಾದನೆ ಕುಸಿತವಾಗಲಿದೆ. ಹೊಸ ರೈತರು ಸಾಲ ವಂಚಿತರಾಗಿ ಖಾಸಗಿ ಸಾಲದ ಮೊರೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ.

ರೈತರಿಗೆ ಶಕ್ತಿ ತುಂಬುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದ್ದು, ಲಾಭದಾಯಕ ವ್ಯವಹಾರಗಳಿಗೆ ಮಾತ್ರ ಸಾಲ ಕೊಡುತ್ತೇವೆ ಎನ್ನುವುದಾದರೆ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳೇ ಎಂದು ಪ್ರಶ್ನಿಸಿದ್ದಾರೆ. ಕಾರ್ಪೊರೇಟ್ ಸಂಸ್ಥೆಗಳ ಸಾಲ ಮನ್ನಾ ಮಾಡುವ ಕೇಂದ್ರ ರೈತರಿಗೆ ಬೆಳೆ ಸಾಲ ವಿತರಿಸಲು ಸ್ಪಂದಿಸುತ್ತಿಲ್ಲ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read