ರೈತರಿಗೆ ಸಿಎಂ ಸಿಹಿ ಸುದ್ದಿ: ಬೆಳೆಗೆ ತೊಂದರೆಯಾಗದಂತೆ ಪಂಪ್ಸೆಟ್ ಗಳಿಗೆ 7 ಗಂಟೆ 3 ಫೇಸ್ ವಿದ್ಯುತ್

ಬೆಂಗಳೂರು: ಬೇಸಿಗೆ ಅವಧಿಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, ಪಂಪ್ಸೆಟ್ ಗಳಿಗೆ 7 ಗಂಟೆ 3 ಫೇಸ್ ವಿದ್ಯುತ್ ಒದಗಿಸುವುದಾಗಿ ತಿಳಿಸಿದ್ದಾರೆ.

ವಿದ್ಯುತ್ ಕೊರತೆ ಉಂಟಾದಲ್ಲಿ ಬೇರೆ ರಾಜ್ಯಗಳಿಂದ ಪೂರೈಕೆ ಮಾಡಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುವುದು. ರೈತರ ಪಂಪ್ ಸೆಟ್ ಗಳಿಗೆ ನಿರಂತರವಾಗಿ 7 ಗಂಟೆ 3 ಫೇಸ್ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ.

ಕೆಐಎಡಿಬಿ ವತಿಯಿಂದ ರಾಜ್ಯದ ವಿವಿಧಡೆ ಜಮೀನು ಭೂಸ್ವಾಧೀನಪಡಿಸಿಕೊಂಡ ಸಂದರ್ಭದಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಅಲ್ಲಿ ಸ್ಥಾಪನೆಯಾಗುವ ಉದ್ಯಮಗಳಲ್ಲಿ ಉದ್ಯೋಗ ಕೊಡಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ರಚಿಸಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read