BREAKING NEWS: ಆಸ್ತಿ ವಿವಾದ: ಮಾವನಿಂದಲೇ ಅಳಿಯನ ಮೇಲೆ ಫೈರಿಂಗ್

ಬೆಳಗಾವಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಾವನೇ ಅಳಿಯನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ.

ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. 30 ಗುಂಟೆ ಜಮೀನಿಗಾಗಿ ಶಾಂತಿನಾಥ್ ಅಲಗೂರು ಮೇಲೆ ಮಾವ ಗುಂಡಿನ ದಾಳಿ ನಡೆಸಿದ್ದಾರೆ.

32 ವರ್ಷದ ಶಾಂತಿನಾಥ ಎಂಬುವವರ ಮೇಲೆ ಮಾವ ಧನಪಾಲ್ ಆಸಂಗಿ (54) ಗುಂಡಿನ ದಾಳಿ ನಡೆಸಿದ್ದು, ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿರುವ ಶಾಂತಿನಾಥನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read