ಬೆಂಗಳೂರು : ಹಣಕಾಸು ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್’ ವುಡ್ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಹೌದು. ಹಿರಿಯ ಚಲನಚಿತ್ರ ನಿರ್ಮಾಪಕ ಸೂರಪ್ಪಬಾಬು ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಮಿ ಎಚ್.ಜಿ.ಲಕ್ಷ್ಮೀ ಅವರು ಈ ದೂರು ನೀಡಿದ್ದಾರೆ.
ಹೊಸ ಸಿನಿಮಾವೊಂದನ್ನು ನಿರ್ಮಿಸುವುದಾಗಿ ನಂಬಿಸಿ 92 ಲಕ್ಷ ರು. ಸಾಲ ಪಡೆದು, ಕೇವಲ 25 ಲಕ್ಷ ಮಾತ್ರ ವಾಪಸ್ ಕೊಟ್ಟಿದ್ದಾರೆ. ಬಾಕಿ 67 ಲಕ್ಷ ರು. ಅನ್ನು ವಾಪಸ್ ನೀಡಿಲ್ಲ ಎಂದು ಲಕ್ಷ್ಮೀ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ . ಕೋಟಿಗೊಬ್ಬ, ಪೃಥ್ವಿ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವಂತಹ ಸ್ಯಾಂಡಲ್ವುಡ್ ಖ್ಯಾತ ನಿರ್ಮಾಪಕನ ವಿರುದ್ಧ ಈಗ ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
You Might Also Like
TAGGED:ಹಣಕಾಸು ವಂಚನೆ