BREAKING : ‘BBMP’ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣ : ಮೂವರು ನೌಕರರ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು : ‘BBMP’ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ನೌಕರರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಇದೀಗ ವಿಕ್ಟೋರಿಯಾ ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ನೌಕರರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಲ್ಯಾಬ್ ನಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ 9 ಜನರ ಪೈಕಿ ಮೂವರ ಸ್ಥಿತಿ ಗಂಭೀರವಾಗಿತ್ತು. ಗಂಭೀರವಾಗಿದ್ದ ಕಿರಣ್ , ಜ್ಯೋತಿ, ಶಿವಕುಮಾರ್ ಸೇರಿದಂತೆ ಮೂವರು ನೌಕರರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆರೋಗ್ಯದ ಮೇಲೆ ಇನ್ನೂ ನಾಲ್ಕು ದಿನ ನಿಗಾವಹಿಸುವ ಅಗತ್ಯವಿದೆ. ಉಳಿದ ಆರು ಗಾಯಾಳುಗಳ ಆರೋಗ್ಯದಲ್ಲಿ ಕೂಡ ಚೇತರಿಕೆ ಕಾಣುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read