BREAKING: ಸಿಲಿಂಡರ್ ಸ್ಪೋಟಗೊಂಡು ಮೂರು ಮನೆಗೆ ಬೆಂಕಿ: ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರು

ಹಾಸನ: ಸಿಲಿಂಡರ್ ಸ್ಫೋಟಗೊಂಡು ಮೂರು ಮನೆಗಳು ಹೊತ್ತಿ ಹುಟ್ಟಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಸೊಪ್ಪಿನಹಳ್ಳಿಯಲ್ಲಿ ನಡೆದಿದೆ.

ಚೆನ್ನಬಸವಯ್ಯ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಕ್ಕಪಕ್ಕದ ಮನೆಗಳಿಗೂ ಬೆಂಕಿ ವ್ಯಾಪಿಸಿದೆ. ಚೆನ್ನಬಸವಯ್ಯ, ರಾಮಣ್ಣ, ರೇಣುಕಪ್ಪ ಅವರಿಗೆ ಸೇರಿದ ಮನೆಗಳಿಗೆ ಹಾನಿಯಾಗಿದೆ. ಮೂರು ಮನೆಗಳಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಘಟನೆಯಲ್ಲಿ ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read