ಬೆಂಗಳೂರಿನ ಹಲವೆಡೆ ಪಟಾಕಿ ಗೋದಾಮಿನ ಮೇಲೆ ದಾಳಿ : 25 ಲಕ್ಷ ಮೌಲ್ಯದ ಪಟಾಕಿ ಜಪ್ತಿ

ಬೆಂಗಳೂರು : ಬೆಂಗಳೂರಿನ ಹಲವೆಡೆ ಪೊಲೀಸರು ಪಟಾಕಿ ಗೋದಾಮಿನ ಮೇಲೆ ದಾಳಿ ನಡೆಸಿ 25 ಲಕ್ಷ ಮೌಲ್ಯದ ಪಟಾಕಿ ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ವಿಜಯಪುರ ಚನ್ನರಾಯಪಟ್ಟಣದಲ್ಲಿ ಪೊಲೀಸರು ದಾಳಿ ಮಾಡಿ ಮಾರಾಟಗಾರರಿಗೆ ಶಾಕ್ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 25 ಲಕ್ಷ ಮೌಲ್ಯದ ಪಟಾಕಿಯನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ಅಲರ್ಟ್ ಆದ ರಾಜ್ಯ ಸರ್ಕಾರ ಹಲವು ಕಠಿಣ ಕ್ರಮ ತೆಗೆದುಕೊಂಡಿದೆ. ಬೆಂಗಳೂರಿನ ಪಟಾಕಿ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಅನೇಕಲ್ ನ ಅತ್ತಿಬೆಲೆಯಲ್ಲಿ ಪಟಾಕಿ ದುರಂತಕ್ಕೆ ನಡೆದಿದ್ದು, ಘೋರ ದುರಂತದಲ್ಲಿ 14 ಮಂದಿ ಸುಟ್ಟು ಕರಕಲಾಗಿದ್ದಾರೆ. ಅನೇಕಲ್ ನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read