ʼರಕ್ತದೊತ್ತಡʼ ಸಮಸ್ಯೆ ನಿವಾರಣೆಯಾಗಲು ಅನುಸರಿಸಿ ಈ ಟಿಪ್ಸ್

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಜೀವನಶೈಲಿ, ಒತ್ತಡದ ಜೀವನದಿಂದಾಗಿ ಈ ಸಮಸ್ಯೆ ಕಂಡುಬರುತ್ತದೆ. ಹಾಗಾಗಿ ಈ ಕಾಯಿಲೆಯಿಂದ ದೂರವಿರಲು ಈ ಟಿಪ್ಸ್ ಫಾಲೋ ಮಾಡಿ.

*ಉಪ್ಪು ರಕ್ತದೊತ್ತಡ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಆಹಾರದಲ್ಲಿ ಉಪ್ಪನ್ನು ಮಿತವಾಗಿ ಬಳಸಬೇಕು. ಉಪ್ಪು ಹೊಂದಿರುವ ಆಹಾರಗಳನ್ನು ತಿನ್ನುವುದನ್ನು ಕಡಿಮೆ ಮಾಡಬೇಕು. ಉಪ್ಪಿನಕಾಯಿ, ಚಿಪ್ಸ್ , ಪಾಪಾಡ್ ಚೀಸ್, ಬ್ರೆಡ್, ಬಿಸ್ಕತ್ತುಗಳು, ಮಸಾಲೆಗಳು, ಸೋಡಾದಂತಹ ಸಂಸ್ಕರಿಸಿದ ಆಹಾರಗಳ ಸೇವನೆಯನ್ನು ಕಡಿಮೆ ಮಾಡಬೇಕು.

*ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಾಧ್ಯವಾದಷ್ಟು ನೀರನ್ನು ಕುಡಿಯಬೇಕು. ಪ್ರತಿದಿನ ಕನಿಷ್ಠ ಎಂದರೂ 10 ಗ್ಲಾಸ್ ನೀರನ್ನು ಸೇವಿಸಬೇಕು. ಇದರಿಂದ ರಕ್ತದೊತ್ತಡ ಸಮಸ್ಯೆ ನಿವಾರಣೆಯಾಗುತ್ತದೆ.

*ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಆರೋಗ್ಯಕರ ಆಹಾರಗಳನ್ನು ಸೇವಿಸಬೇಕು. ಹಣ್ಣುಗಳು, ತರಕಾರಿಗಳು, ಧಾನ್ಯಗಳು, ಸಲಾಡ್ ಗಳನ್ನು ಸೇವಿಸಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read