BREAKING NEWS: ಅನಾಥಾಶ್ರಮದಲ್ಲಿ ಫುಡ್ ಪಾಯಿಸನ್: ಓರ್ವ ವಿದ್ಯಾರ್ಥಿ ಸಾವು!

ಮಂಡ್ಯ: ಅನಾಥಶ್ರಮದಲ್ಲಿ ಪುಡ್ ಪಾಯಿಸನ್ ನಿಂದಾಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲೆಯಲ್ಲಿ ನಡೆದಿದೆ.

ಇಲ್ಲಿನ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 6ನೇ ತರಗತಿ ವಿದ್ಯಾರ್ಥಿ ಕೇರ್ಲಾಂಗ್ (13) ಮೃತ ಬಾಲಕ. ಫುಡ್ ಪಾಯಿಸನ್ ನಿಂದಾಗಿ ಅನಾಥಾಶ್ರಮದ ಹಲವು ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಮಕ್ಕಳನ್ನು ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಮಳವಳ್ಳಿಯಲ್ಲಿ ಉದ್ಯಮಿಯೊಬ್ಬರು ಹೋಳಿ ಹಬ್ಬ ಆಚರಿಸಿದ್ದರು. ಈ ವೇಳೆ ಊಟ ನೀಡಿದ್ದರು. ಉಳಿದ ಊಟವನ್ನು ಅನಾಥಾಶ್ರಮಕ್ಕೆ ನೀಡಿದ್ದರು. ಈ ಊಟ ಸೇವಿಸಿ ಫುಡ್ ಪಾಯಿಸನ್  ಆಗಿ 29 ಮಕ್ಕಳು ಅಸ್ವಸ್ಥರಾಗಿದ್ದಾರೆ. ಊಟ ಸೇವಿಸಿದ್ದ ಇತರ ಜನರು ಕೂಡ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read