ರೈತರ ಗಮನಕ್ಕೆ ; ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಸೂಚನೆ

ಬಳ್ಳಾರಿ : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

ಈ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿಕೊಳ್ಳಬೇಕು.

ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ಇಂತಿವೆ:* ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಮತ್ತು ಎಳ್ಳು ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.

ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ, ಸಜ್ಜೆ ಬೆಳೆಗಳಿಗೆ ವಿಮೆ ಮಾಡಿಸಲು ಆಗಸ್ಟ್ 16 ಕೊನೆಯ ದಿನ ಮತ್ತು ಎಳ್ಳು ಬೆಳೆಗೆ ವಿಮೆ ಮಾಡಲು ಜುಲೈ 15 ಕೊನೆಯ ದಿನವಾಗಿದೆ.ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ ಮತ್ತು ಗ್ರಾಮಪಂಚಾಯತ್ಗಳಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read