ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಚಾರ ಮಾಡಲು ನಮ್ಮ ದೇಶದ ಕಾನೂನಿನಲ್ಲಿ ಅವಕಾಶವಿಲ್ಲ. ಹೀಗಾಗಿ ವಿದೇಶಿಗರನ್ನು ಕರೆಯಬೇಡಿ ಎಂದು ಸೂಚನೆ ನೀಡಿದ್ದೇವೆ. ಈ ವಿಚಾರವನ್ನು ಪೊಲೀಸ್‌ ಇಲಾಖೆಯ ಮೂಲಕ ಮಿಲಾದುನ್ನಬಿ ಕಾರ್ಯಕ್ರಮದ ಆಯೋಜಕರ ಗಮನಕ್ಕೆ ತರಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈದ್ ಮಿಲಾದ್ ಪ್ರಯುಕ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ 5, 6 ರಂದು ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಿದೇಶಿಗರು ಪಾಲ್ಗೊಳ್ಳಲು ಧರ್ಮ ಪ್ರಚಾರ ನಡೆಸಲು ಅವಕಾಶವಿಲ್ಲ ಎಂದು ಪೊಲೀಸ್ ಇಲಾಖೆ ಆಯೋಜಕರಿಗೆ ಸ್ಪಷ್ಟವಾಗಿ ತಿಳಿಸಿದೆ. ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ ನಿಗಾ ವಹಿಸಲಿದೆ. ಪೊಲೀಸ್ ಇಲಾಖೆಯವರು ಕೂಡ ನಿಗಾ ವಹಿಸುತ್ತಾರೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿದೇಶಿಗರನ್ನು ಭಾಷಣಕ್ಕಷ್ಟೇ ಅಲ್ಲ, ಅವರ ಉಪಸ್ಥಿತಿಗೂ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read