ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ನಾಪತ್ತೆಯಾಗಿದ್ದಾರೆ.
ಶರತ್(33) ನಾಪತ್ತೆಯಾದವರು. ಕಳೆದ 4 ದಿನಗಳಿಂದ ನಾಪತ್ತೆಯಾಗಿರುವ ಫಾರೆಸ್ಟ್ ಗಾರ್ಡ್ ಶರತ್ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ನಾಪತ್ತೆಯಾದ ಶರತ್ ಮೂಲತಃ ಕೊಡಗು ಜಿಲ್ಲೆಯ ಆಲೂರು ನಿವಾಸಿಯಾಗಿದ್ದಾರೆ. ಸಖರಾಯಪಟ್ಟಣದ ನೀಲಗಿರಿ ತೋಪಿನಲ್ಲಿ ಶರತ್ ಗಾಗಿ ಹುಡುಕಾಟ ನಡೆಸಲಾಗಿದೆ. ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ಶರತ್ ಗಾಗಿ ಹುಡುಕಾಟ ನಡೆಸಿದ್ದಾರೆ.
ಕೊಡಗಿನಿಂದ 3-4 ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.