ಬೆಂಗಳೂರು : ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ( D.K Suresh ) ಆಯ್ಕೆ ಆಗಿದ್ದಾರೆ.
ಬೆಂಗಳೂರು ಡೇರಿ ವೃತ್ತದಲ್ಲಿರುವ ಕಚೇರಿಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದು, ನಂತರ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಆಯ್ಕೆ ಆಗಿದ್ದಾರೆ.
ಒಕ್ಕೂಟದ ಸದಸ್ಯರು ಹಾಗೂ ಚುನಾಯಿತರು ಅವರನ್ನು ಬಮೂಲ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು. ಬಮೂಲ್ ಕಚೇರಿ ಬಳಿ ಡಿಕೆ ಸುರೇಶ್ ಗೆ ಹೂವಿನ ಹಾರ ಹಾಕಿ, ಸಿಹಿ ಹಂಚಿ D.K ಸುರೇಶ್ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ.
ಧನ್ಯವಾದಗಳು! ಇಂದು ಬಮೂಲ್ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ಇದಕ್ಕೆ ಕಾರಣೀಭೂತರಾದ ಸರ್ವರಿಗೂ ಧನ್ಯವಾದಗಳು. ಇದು ರೈತರಿಗೆ ಸಂದ ವಿಜಯ. ಸಹಕಾರಿ ಕ್ಷೇತ್ರದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಹಲವಾರು ಕಾರ್ಯಗಳನ್ನು ಮುಂದೆಯೂ ಮಾಡಲಿದ್ದೇನೆ. ಈ ಹೊಸ ಜವಾಬ್ದಾರಿ ಹಾಗೂ ಪಯಣಕ್ಕೆ ಎಲ್ಲರ ಸಹಕಾರವಿರಲಿ ಎಂದು ಟ್ವೀಟ್ ಮಾಡಿದ್ದಾರೆ.
ಪ್ರೀತಿಗೆ ಚಿರಋಣಿ!
— DK Suresh (@DKSureshINC) June 19, 2025
ಬೆಂಗಳೂರು ಸಹಕಾರ ಹಾಲು ಒಕ್ಕೂಟದ ನೂತನ ಅಧ್ಯಕ್ಷನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ವಿವಿಧ ಮುಖಂಡರು, ಹಿತೈಷಿಗಳು, ಸಾರ್ವಜನಿಕರು ನನ್ನನ್ನು ಭೇಟಿ ಮಾಡಿ, ಅಭಿನಂದಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಹಾಗೂ ಗೆಲುವಿನ ಸಂಭ್ರಮಾಚರಣೆಯಲ್ಲಿ ಅಸಂಖ್ಯಾತ ಜನರು ನೆರೆದಿದ್ದರು. ನನ್ನ ಗೆಲುವನ್ನು ನಿಮ್ಮ ಗೆಲುವಿನಂತೆ… pic.twitter.com/3s8m5JFYSp
ಧನ್ಯವಾದಗಳು!
— DK Suresh (@DKSureshINC) June 19, 2025
ಇಂದು ಬಮೂಲ್ ಆಡಳಿತ
ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ಇದಕ್ಕೆ ಕಾರಣೀಭೂತರಾದ ಸರ್ವರಿಗೂ ಧನ್ಯವಾದಗಳು. ಇದು ರೈತರಿಗೆ ಸಂದ ವಿಜಯ. ಸಹಕಾರಿ ಕ್ಷೇತ್ರದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಹಲವಾರು ಕಾರ್ಯಗಳನ್ನು ಮುಂದೆಯೂ ಮಾಡಲಿದ್ದೇನೆ. ಈ ಹೊಸ ಜವಾಬ್ದಾರಿ ಹಾಗೂ ಪಯಣಕ್ಕೆ ಎಲ್ಲರ… pic.twitter.com/AqnsT0CuoV
.
ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಿದ ಕ್ಷಣಗಳು.#BAMUL pic.twitter.com/Ypv02tDSzj
— DK Suresh (@DKSureshINC) June 19, 2025