ಬೆಂಗಳೂರು : ಇನ್ಮುಂದೆ ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯವಾಗಿದ್ದು, ರಾಜ್ಯ ಸರ್ಕಾರ ಸದ್ಯದಲ್ಲೇ ಮಾರ್ಗಸೂಚಿ ಪ್ರಕಟ ಮಾಡಲು ನಿರ್ಧರಿಸಿದೆ.
ಹೌದು, ಬೆಂಗಳೂರು ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತ ಸರ್ಕಾರ ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯಗೊಳಿಸಲು ನಿರ್ಧರಿಸಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಿದೆ.
ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಮೊನ್ನೆ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದರು. ಒಂದು ವೇಳೆ ಅಲ್ಲಿ ವೈದ್ಯಕೀಯ ವ್ಯವಸ್ಥೆ, ಆಂಬುಲೆನ್ಸ್ ಇದ್ದರೆ ಹಲವರ ಪ್ರಾಣ ಉಳೀತಿತ್ತು. ಈ ನಿಟ್ಟಿನಲ್ಲಿ ಎಚ್ಚೆತ್ತ ಆರೋಗ್ಯ ಇಲಾಖೆ ಇನ್ಮುಂದೆ ನಡೆಯುವ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಲು ಚಿಂತನೆ ನಡೆಸಿದೆ.
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನಸ್ವಾಮಿ ಸ್ಟೆಡಿಯಂ ನಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಒಟ್ಟು ತಲಾ 25 ಲಕ್ಷ ಪರಿಹಾರ ಘೋಷಣೆಯಾಗಿದೆ. 18 ವರ್ಷಗಳ ಬಳಿಕ ಐಎಲ್ ಟ್ರೋಫಿ ಗೆದ್ದ ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲೆಂದು ಚಿನ್ನಸ್ವಾಮಿ ಸ್ಟೆಡಿಯಂಗೆ ಬಂದಿದ್ದ ಅಭಿಮಾನಿಗಳಲ್ಲಿ 11 ಜನರು ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.