ಗುತ್ತಿಗೆದಾರನಿಗೆ ಜಾತಿ ನಿಂದನೆ ಪ್ರಕರಣ: ಮುನಿರತ್ನರದ್ದೇ ಧ್ವನಿ: ಎಫ್ಎಸ್ಎಲ್ ವರದಿ

ಬೆಂಗಳೂರು: ಗುತ್ತಿಗೆದಾರನಿಗೆ ಮೊಬೈಲ್ ನಲ್ಲಿ ಶಾಸಕ ಮುನಿರತ್ನ ಜಾತಿ ನಿಂದನೆ ಪ್ರಕರಣದ ಎಫ್ಎಸ್ಎಲ್ ವರದಿ ಬಂದಿದ್ದು, ಆಡಿಯೋ ದನಿ ಮುನಿರತ್ನ ಅವರದೇ ಎನ್ನುವುದು ದೃಢಪಟ್ಟಿದೆ ಎಂದು ಹೇಳಲಾಗಿದೆ.

ಗುತ್ತಿಗೆದಾರ ಚೆಲುವರಾಜು ಅವರ ಜೊತೆಗೆ ಮೊಬೈಲ್ ನಲ್ಲಿ ಮಾತನಾಡುವಾಗ ಶಾಸಕ ಮುನಿರತ್ನ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುನಿರತ್ನ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು.

ಮುನಿರತ್ನ ಮತ್ತು ಚೆಲುವರಾಜು ಅವರ ಧ್ವನಿ ಮಾದರಿ ಸಂಗ್ರಹಿಸಿ ಎಫ್ಎಸ್ಎಲ್ ಗೆ ಕಳಿಸಿದ್ದು, ಅದರ ವರದಿ ಬಂದಿದೆ. ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುನಿರತ್ನ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read