BREAKING NEWS: ಭಾರೀ ವಿರೋಧ, ಹಿಂಸಾಚಾರದಲ್ಲಿ 19 ಮಂದಿ ಸಾವು ಬೆನ್ನಲ್ಲೇ ಜಾಲತಾಣಗಳ ನಿಷೇಧ ವಾಪಸ್: ನೇಪಾಳ ಸರ್ಕಾರ ಘೋಷಣೆ

ಕಠ್ಮಂಡು: ಹಿಂಸಾತ್ಮಕ ಪ್ರತಿಭಟನೆಗಳ ನಂತರ ನೇಪಾಳ ಸರ್ಕಾರ ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧವನ್ನು ತೆಗೆದುಹಾಕಿದೆ.

ಯುವಕರ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ, ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸುವ ತನ್ನ ಹಿಂದಿನ ನಿರ್ಧಾರವನ್ನು ನೇಪಾಳ ಸರ್ಕಾರ ಸೋಮವಾರ ಹಿಂತೆಗೆದುಕೊಂಡಿದೆ ಎಂದು ಘೋಷಿಸಿದೆ.

ಪ್ರತಿಭಟನೆಯಿಂದಾಗಿ ಕನಿಷ್ಠ 19 ಜನರು ಸಾವನ್ನಪ್ಪಿದ್ದು, 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಕ್ಯಾಬಿನೆಟ್‌ನ ತುರ್ತು ಸಭೆಯ ನಂತರ ಸರ್ಕಾರ ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸುವ ತನ್ನ ಹಿಂದಿನ ನಿರ್ಧಾರವನ್ನು ಹಿಂತೆಗೆದುಕೊಂಡಿದೆ ಎಂದು ನೇಪಾಳ ಸಂವಹನ, ಮಾಹಿತಿ ಮತ್ತು ಪ್ರಸಾರ ಸಚಿವ ಪೃಥ್ವಿ ಸುಬ್ಬಾ ಗುರುಂಗ್ ಘೋಷಿಸಿದ್ದಾರೆ.

ಕಠ್ಮಂಡುವಿನ ಹೃದಯಭಾಗದಲ್ಲಿರುವ ಸಂಸತ್ತಿನ ಮುಂದೆ ಬೃಹತ್ ಪ್ರತಿಭಟನೆಯನ್ನು ಮುನ್ನಡೆಸಿದ ‘ಜನರಲ್ ಝಡ್’ ಅವರ ಬೇಡಿಕೆಗಳ ಪ್ರಕಾರ ಸಾಮಾಜಿಕ ಮಾಧ್ಯಮ ತಾಣಗಳನ್ನು ಪುನರಾರಂಭಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮಾಹಿತಿ ಸಚಿವಾಲಯವು ಸಂಬಂಧಪಟ್ಟ ಸಂಸ್ಥೆಗಳಿಗೆ ಆದೇಶಿಸಿದೆ ಎಂದು ಗುರುಂಗ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read