ಆಹ್ವಾನ ಹಿನ್ನೆಲೆ ಸೋಮಣ್ಣ ಕಾರ್ಯಕ್ರಮಕ್ಕೆ ಸಚಿವರಾದ ಪರಮೇಶ್ವರ್, ರಾಜಣ್ಣ

ತುಮಕೂರು: ಸಿದ್ದಗಂಗಾ ಮಠದಲ್ಲಿ ಡಿಸೆಂಬರ್ 6ರಂದು ಆಯೋಜಿಸಿರುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿ. ಸೋಮಣ್ಣ ಆಹ್ವಾನ ನೀಡಿದ್ದು, ನಾನು ಮತ್ತು ಕೆ.ಎನ್. ರಾಜಣ್ಣ ಹೋಗುತ್ತಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರವಿಂದ ಲಿಂಬಾವಳಿ ಮತ್ತು ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ವಿಚಾರ ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ನಡೆಯುತ್ತದೆ. ನಮ್ಮ ಹಂತದಲ್ಲಿ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ತುಮಕೂರು ಲೋಕಸಭೆ ಚುನಾವಣೆ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಕೃಷ್ಣಬೈರೇಗೌಡರು ಉಸ್ತುವಾರಿ ಸಚಿವರಾಗಿದ್ದು, ಅವರು ಕಾರ್ಯಕರ್ತರು, ಮುಖಂಡರ ಸಭೆ ನಡೆಸಿ ಕೆಪಿಸಿಸಿಗೆ ವರದಿ ನೀಡಲಿದ್ದಾರೆ. ವರದಿಯ ನಂತರ ಮುಂದಿನ ಪ್ರಕ್ರಿಯೆ ನಡೆಯಲಿದೆ. ನಾನು ಕೂಡ ಅವರೊಂದಿಗೆ ಮಾತನಾಡಿದ್ದು, ಶೀಘ್ರದಲ್ಲಿಯೇ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read