ಪ್ರಾಂಶುಪಾಲರ ಮೊಬೈಲ್ ಕದ್ದು ಲಕ್ಷಾಂತರ ರೂಪಾಯಿ ಹಣ ವರ್ಗಾಯಿಸಿಕೊಂಡು ಎಸ್ಕೇಪ್ ಆದ ಖದೀಮರು

ಗದಗ: ಕಾಲೇಜು ಪ್ರಾಂಶುಪಾಲರೊಬ್ಬರ ಮೊಬೈಲ್ ಕದ್ದ ಕಳ್ಳರು ಆನ್ ಲೈನ್ ಮೂಲಕ ಅವರ ಖಾತೆಯಲ್ಲಿದ್ದ ಲಕ್ಷಾಂತರ ರೂಪಾ ಹಣ ವರ್ಗಾಯಿಸಿಕೊಂಡು ಪರಾರಿಯಾಗಿರುವ ಘಟನೆ ಗದಗ ಜಿಲ್ಲೆಯ ನರಗುಂದದಲ್ಲಿ ನಡೆದಿದೆ.

ಶ್ರೀಕಾಂತ್ ಕೃಷ್ಣಾಜಿ ಜೋಷಿ ಮೊಬೈಲ್ ಹಾಗೂ ಹಣ ಕಳೆದುಕೊಂಡ ಪ್ರಾಂಶುಪಾಲರು. ಎಂದಿನಂತೆ ಪ್ರಾಂಶುಪಾಲ ಶ್ರೀಕಾಂತ್ ಕೃಷ್ಣಾಜಿ ನರಗುಂದ ಪಣ್ಣಣದ ಬಸ್ ನಿಲ್ದಾಣದ ಮೂಲಕ ಕಾಲೇಜಿಗೆ ಹೋಗುತ್ತಿದ್ದರು. ಈ ವೇಳೆ ಅವರ ಜೇಬಿನಲ್ಲಿದ್ದ ಮೊಬೈಲ್ ನ್ನು ಕಳ್ಳರು ಕದ್ದಿದ್ದಾರೆ. ಬಳಿಕ ಮೊಬೈಲ್ ನಲ್ಲಿ ಆನ್ ಲೈನ್ ಮೂಲಕ ಯುಪಿಐ ಬಳಸಿಕೊಂಡು 1 ಲಕ್ಷದ 40 ಸಾವಿರ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ.

ಒಟ್ಟು ಮೂರು ಹಂತದಲ್ಲಿ ಹಣ ವರ್ಗಾವಣೆ ಮಾಡಿಕೊಂಡು ಕಳ್ಳರು ನಾಪತ್ತೆಯಾಗಿದ್ದಾರೆ. ಪ್ರಾಂಶುಪಾಲ ಶ್ರೀಕಾಂತ್ ಕೃಷ್ಣಾಜಿ ನರಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read