
ಗೌರಿ – ಗಣೇಶ ಹಬ್ಬ ಸಮೀಪಿಸುತ್ತಿದ್ದು, ಇದರ ಸಂಭ್ರಮದ ಆಚರಣೆಗಾಗಿ ಸಾರ್ವಜನಿಕರು ಸಜ್ಜಾಗುತ್ತಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ಆಚರಣೆಗಾಗಿ ಈಗಾಗಲೇ ತಯಾರಿಗಳು ನಡೆದಿದ್ದು, ಬೆಂಗಳೂರಿನ ಜೆಪಿ ನಗರದ ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್ ಈ ಬಾರಿ ವಿಶಿಷ್ಟವಾಗಿ ಆಚರಿಸಲು ಮುಂದಾಗಿದೆ.
ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್ ಪ್ರತಿ ವರ್ಷವೂ ಹೊಸತನ ಸೃಷ್ಟಿಸುತ್ತಿದ್ದು, ಈ ಬಾರಿಯ ಗಣೇಶೋತ್ಸವವನ್ನು ನಾಣ್ಯ ಮತ್ತು ನೋಟುಗಳಿಂದ ಅಲಂಕರಿಸುವ ಮೂಲಕ ವೈಭವದಿಂದ ಆಚರಿಸಲು ಸಿದ್ಧತೆ ನಡೆದಿದೆ.
50 ಲಕ್ಷ ರೂ. ಮೌಲ್ಯದ ನಾಣ್ಯಗಳು ಹಾಗೂ ಕೋಟ್ಯಾಂತರ ರೂ ಮೌಲ್ಯದ ನೋಟುಗಳಿಂದ ಗಣೇಶನನ್ನು ಅಲಂಕರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ 150ಕ್ಕೂ ಅಧಿಕ ಮಂದಿಯ ತಂಡ ಕಾರ್ಯ ನಿರತವಾಗಿದೆ. ಗಣೇಶನ ಅಲಂಕಾರಕ್ಕಾಗಿ 2, 10, 20 ಮೊತ್ತದ ಒಂದೂವರೆ ಲಕ್ಷ ನಾಣ್ಯಗಳು ಹಾಗೂ 5, 10, 20, 100 ಹಾಗೂ 500 ರೂಪಾಯಿ ಮೌಲ್ಯದ ನೋಟುಗಳನ್ನು ಬಳಸಿಕೊಳ್ಳಲಾಗುತ್ತಿದೆ.

 
			 
		 
		 
		 
		 Loading ...
 Loading ... 
		 
		 
		