ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆ ತಂದಿದ್ದ ಕೈದಿಗೆ ಗಾಂಜಾ ಕೊಡಲು ಬಂದವ ಅರೆಸ್ಟ್

ಶಿವಮೊಗ್ಗ: ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ಕರೆ ತಂದಿದ್ದ ಕೈದಿಗೆ ಗಾಂಜಾ ಕೊಡಲು ಬಂದಿದ್ದ ವ್ಯಕ್ತಿಯನ್ನು ಡಿಎಆರ್ ಪೊಲೀಸರು ಹಿಡಿದು ದೊಡ್ಡಪೇಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಜಿಲಾನ್ ಗಾಂಜಾ ಕೊಡಲು ಬಂದು ಪೊಲೀಸರ ಕೈಗೆ ಸಿಕ್ಕಿ ಬಿದ್ದ ವ್ಯಕ್ತಿಯಾಗಿದ್ದಾನೆ. ಕೇಂದ್ರ ಕಾರಾಗೃಹದಲ್ಲಿ ಕೈದಿ ಅಸ್ಲಾಂಗೆ ಅನಾರೋಗ್ಯ ಉಂಟಾಗಿದ್ದರಿಂದ ಡಿಎಆರ್ ಪೊಲೀಸರು ಮೆಗ್ಗಾನ್ ಆಸ್ಪತ್ರೆಗೆ ಕರೆ ತಂದಿದ್ದಾರೆ. ಈ ವೇಳೆ ಅಸ್ಲಾಂಗೆ ಜಿಲಾನ್ ಗಾಂಜಾ ಕೊಡಲು ಬಂದಿದ್ದ. ಡಿಎಆರ್ ಪೋಲೀಸರು ಇದನ್ನು ಗಮನಿಸಿ ಸಾರ್ವಜನಿಕರ ನೆರವಿನಿಂದ ಆರೋಪಿಯನ್ನು ಹಿಡಿದು ದೊಡ್ಡಪೇಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿದ್ಯಾನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಅಸ್ಲಾಂ ಆರೋಪಿಯಾಗಿದ್ದು, ಜೈಲಿನಲ್ಲಿದ್ದಾನೆ. ಜಿಲಾನ್ ಕೂಡ ಕೊಲೆ ಪ್ರಕರಣವೊಂದರ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read