BREAKING : ಬೆಂಗಳೂರಿನಲ್ಲಿ ‘ಗ್ಯಾಸ್ ಸಿಲಿಂಡರ್’ ಲೀಕ್ ಆಗಿ ಅಗ್ನಿ ಅವಘಡ : 7 ಕಾರ್ಮಿಕರಿಗೆ ಗಂಭೀರ ಗಾಯ

ರಾಮನಗರ: ಗ್ಯಾಸ್ ಲೀಕ್ ಆಗಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 7 ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಬಿಡದಿ ಬಳಿಯ ಕಾಡುಮನೆ ಸರ್ಕಲ್ ಬಳಿ ನಡೆದಿದೆ.

ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಶೆಡ್ ವೊಂದರಲ್ಲಿ ಈ ಘಟನೆ ನಡೆದಿದೆ. ಶೆಡ್ ನಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಶೆಡ್ ನಲ್ಲಿ ವಾಸವಾಗಿದ್ದ 7 ಕಾರ್ಮಿಕರಿಗೆ ಗಂಭೀರವಾದ ಸುಟ್ಟಗಾಯಗಳಾಗಿವೆ.

ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್ ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read