ನಟ ದರ್ಶನ್ ಗೆ ಸಿಗುತ್ತಾ ಮನೆಯೂಟ..? : ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಿಗದಿ.!

ಬೆಂಗಳೂರು : ಮನೆಯೂಟಕ್ಕೆ ಸಲ್ಲಿಸಿದ್ದ ನಟ ದರ್ಶನ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ.

ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ನಟ ದರ್ಶನ್ ಅರ್ಜಿ ವಿಚಾರಣೆ ನಡೆಯಲಿದ್ದು, ನಟ ದರ್ಶನ್ ಗೆ ಮನೆಯೂಟ ನೀಡಬೇಕಾ..? ಅಥವಾ ಜೈಲೂಟವೇ ಮುಂದುವರೆಸಬೇಕಾ ಎಂಬುದರ ಬಗ್ಗೆ ಕೋರ್ಟ್ ತೀರ್ಪು ಪ್ರಕಟಿಸಲಿದೆ.

ನಟ ದರ್ಶನ್ ಗೆ ಆರೋಗ್ಯ ಸರಿ ಇದೆ, ಮನೆಯೂಟದ ಅವಶ್ಯಕತೆ ಇಲ್ಲ ಎಂದು ಜೈಲಾಧಿಕಾರಿಗಳು ಹೈಕೋರ್ಟ್ ಗೆ ವರದಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಗೆ ಮನೆಯೂಟ ನೀಡುವ ಬಗ್ಗೆ 10 ದಿನಗಳಲ್ಲಿ ನಿರ್ಧಾರ ತೆಗೆದುಕೊಂಡು ವರದಿ ಸಲ್ಲಿಸುವಂತೆ ಹೈಕೋರ್ಟ್ ಇತ್ತೀಚೆಗೆ ಹೇಳಿತ್ತು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದ್ದು, ಆರೋಪಿಗಳಿಗೆ ಜೈಲುವಾಸವೇ ಗತಿಯಾಗಿದೆ. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 28 ರವರೆಗೆ ವಿಸ್ತರಿಸಿ ಆದೇಶ ನೀಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read