ಆಭರಣ ಮಳಿಗೆಗೆ ನುಗ್ಗಿ 21 ಲಕ್ಷ ಮೌಲ್ಯದ ಚಿನ್ನಾಭರಣ, 5 ಲಕ್ಷ ನಗದು ಲೂಟಿ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ ಆಭರಣ ಅಂಗಡಿಯಿಂದ 300 ಗ್ರಾಂ ತೂಕದ ಚಿನ್ನಾಭರಣ ಮತ್ತು 5 ಲಕ್ಷ ರೂ. ಲೂಟಿ ಮಾಡಲಾಗಿದೆ.

ಜಲೇಶ್ವರ ಕಮರ್ದ ಪೊಲೀಸ್ ಠಾಣಾ ವ್ಯಾಪ್ತಿಯ ಕಮರ್ದಾ ಬಜಾರ್‌ನಲ್ಲಿ ಲೂಟಿ ನಡೆದಿದೆ. ಆಭರಣ ಅಂಗಡಿ ಮಾಲೀಕರು ಕುಡಿಯುವ ನೀರು ತರಲು ಹೊರಗೆ ಹೋಗಿದ್ದರು. ಆ ವೇಳೆ ದುಷ್ಕರ್ಮಿಗಳು ಆಭರಣ ಮಳಿಗೆಗೆ ನುಗ್ಗಿ ಚಿನ್ನಾಭರಣ ಚೀಲ ಹಾಗೂ ಖಜಾನೆಯಲ್ಲಿದ್ದ 5 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.

ದುಷ್ಕರ್ಮಿಗಳು ತೆಗೆದುಕೊಂಡು ಹೋಗಿದ್ದ ಚಿನ್ನಾಭರಣ ಚೀಲದಲ್ಲಿ 300 ಗ್ರಾಂ ತೂಕದ ಆಭರಣಗಳಿದ್ದವು ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ. ಈ ಚಿನ್ನಾಭರಣಗಳ ಮಾರುಕಟ್ಟೆ ಮೌಲ್ಯ ಅಂದಾಜು 21 ಲಕ್ಷ ರೂ.

ದರೋಡೆಯಾದ ಬಗ್ಗೆ ಮಾಹಿತಿ ಪಡೆದ ಕಮರ್ದಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read