GOOD NEWS : ‘ಅಂಬಿಗರ ಚೌಡಯ್ಯ’ ಸಮುದಾಯದವರಿಗೆ ಗುಡ್ ನ್ಯೂಸ್, ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!

(2025-26) ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು ಮತ್ತು ರಿನೀವಲ್), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ(ಸೇವಾಸಿಂಧೂ) ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರ ವಯಸ್ಸು ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ಮಿತಿಯೊಳಗಿರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ನಿರುದ್ಯೋಗಿ ಆಗಿರಬೇಕು. ಸ್ವಯಂ ಟ್ಯಾಕ್ಸಿ ಚಾಲನೆ ಉದ್ದೇಶಕ್ಕೆ ವಾಹನವನ್ನು ನೋಂದಾಯಿಸಬೇಕು. ಅರ್ಜಿ ಸಲ್ಲಿಸಲು ಜುಲೈ, 04 ಕೊನೆಯ ದಿನವಾಗಿದೆ. (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://ambigaradevelopment.karnataka.gov.in ಅಥವಾ ನಿಗಮದ ದೂ.ಸಂ.080-22864099 ನ್ನು ಸಂಪರ್ಕಿಸಬಹುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ದೂ.ಸಂ.08272-221656 ನ್ನು ಸಂಪರ್ಕಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read