GOOD NEWS: ಬಿ ಖಾತಾ ಆಸ್ತಿಗೆ ಎ ಖಾತಾ ನೀಡಲು ಸಂಪುಟ ಸಭೆ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿ ಖಾತಾ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದೆ. ಬಿ ಖಾತಾ ಆಸ್ತಿಗೆ ಎ ಖಾತಾ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

2024ರ ಸೆಪ್ಟೆಂಬರ್ 30ರವರೆಗೆ ಬಿಬಿಎಂಪಿ ನೀಡಿರುವ ಎಲ್ಲಾ ಬಿ ಖಾತಾ ಗಳಿಗೆ ಎ ಖಾತಾ ಅಥವಾ ಸರಿಯಾದ ಕಾನೂನು ಬದ್ಧ ಖಾತಾ ಎಂದು ನೀಡಲು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಅನೇಕ ವರ್ಷಗಳಿಂದ ಕಾನೂನು ಮಾನ್ಯತೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದ ಬಿ ಖಾತಾದಾರರಿಗೆ ಅನುಕೂಲವಾಗಲಿದೆ. ಶೀಘ್ರದಲ್ಲಿ ನಿಯಮಾವಳಿ ಸಹಿತ ಅಧಿಕೃತ ಆದೇಶ ಹೊರಡಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಪ್ರಸ್ತುತ ಇ- ಖಾತಾ ಜಾರಿಯಲ್ಲಿ ಇರುವುದರಿಂದ ಎ ಖಾತಾ ಹಾಗೂ ಸರಿಯಾದ ಖಾತಾ ಗಳನ್ನು ಹೇಗೆ ವಿತರಿಸಬೇಕು ಎನ್ನುವ ಪ್ರಕ್ರಿಯೆ ಮತ್ತು ಶುಲ್ಕ ವಿವರಗಳನ್ನು ತಿಳಿಸುವ ಸಾಧ್ಯತೆ ಇದೆ. ವಿದ್ಯುತ್, ನೀರು, ಒಳಚರಂಡಿ ಸಂಪರ್ಕ ಸಮಸ್ಯೆಗೆ ಈಗ ಮುಕ್ತಿ ಸಿಗಲಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read