`BMTC’ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : 1 ಕೋಟಿ ರೂ.ವರೆಗೆ ಅಪಘಾತ ವಿಮೆ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಬಿಎಂಟಿಸಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೆಎಸ್ ಆರ್ ಟಿಸಿ ನೌಕರರಿಗೆ ನೀಡುವ 1 ಕೋಟಿ ರೂ. ವಿಮಾ ಯೋಜನೆಯನ್ನು ಬಿಎಂಟಿಸಿ ನೌಕರರಿಗೂ ವಿಸ್ತರಿಸಲಾಗುತ್ತಿದೆ.

ಈ ಕುರಿತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮಾಹಿತಿ ನೀಡಿದ್ದು, ಕಾರ್ಮಿಕ ಕಲ್ಯಾಣ ಯೋಜನೆ ಅಡಿ ಕೆಎಸ್ ಆರ್ ಟಿಸಿ ನೌಕರರಿಗೆ ಒಂದು ಕೋಟಿ ರೂ.ವರೆಗೆ ಅಪಘಾತ ವಿಮಾ ಸೌಲಭ್ಯ ಕಲ್ಪಿಸಲಾಗಿದೆ. ಈ ವ್ಯವಸ್ಥೆಯನ್ನು ಬಿಎಂಟಿಸಿ ನೌಕರರಿಗೂ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.

ಸೇವೆಯಲ್ಲಿದ್ದಾಗ ಮೃತಪಟ್ಟ ಸಾರಿಗೆ ನೌಖರರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರಮೇಲೆ ನೇಮಕಾತಿ ಆದೇಶಗಳನ್ನು ತ್ವರಿತವಾಗಿ ನೀಡಬೇಕು. ಹಂತ ಹಂತವಾಗಿ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read