ರೈತರಿಗೆ ಖುಷಿ ಸುದ್ದಿ : `ಬಗರ್ ಹುಕುಂ’ ಅರ್ಜಿ ಶೀಘ್ರ ವಿಲೇವಾರಿಗೆ `ಆ್ಯಪ್’

ಬೆಂಗಳೂರು : ಬಗರ್ ಹುಕುಂ ಸಾಗುವಳಿ ಮಾಡುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50,53, 57 ಅಡಿ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ ಮಾಡಲು ಬಗರ್ ಹುಕುಂ ತಂತ್ರಾಂಶ ಅನುಷ್ಠಾನ ಮಾಡಲಾಗಿದೆ.

ಈ ಆ್ಯಪ್‌ ನೆರವಿನಿಂದ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇತರ ಚಟುವಟಿಕೆ ಬಗ್ಗೆ ಸ್ಯಾಟಲೈಟ್‌ ಚಿತ್ರದ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯ-ಸಮ್ಮತವಾಗಲಿದೆ. ಅರ್ಜಿಗಳ ಶೀಘ್ರ ವಿಲೇವಾರಿಗೂ ಈ ಆ್ಯಪ್‌ ಸಹಕಾರಿಯಾಗಿಲಿದೆ.

ವಿಕಾಸಸೌಧದಲ್ಲಿ ಬುಧವಾರ ನಡೆದ ಸಭೆಯಲ್ಲಿ ಬಗರ್‌ ಹುಕುಂ ಆ್ಯಪ್‌ ಕುರಿತು ಅಧಿಕಾರಿಗಳು ಸಚಿವರಿಗೆ ಪ್ರಾತ್ಯಕ್ಷಿಕೆ ತೋರಿಸಿದರು. ಈ ವೇಳೆ ಸಚಿವ ಕೃಷ್ಣಬೈರೇಗೌಡ ಅವರು, ಯಾವುದೇ ಲೋಪದೋಷ ಇಲ್ಲದಂತೆ ಆ್ಯಪ್‌ ಅಭಿವೃದ್ಧಿಪಡಿಸುವಂತೆ ನಿರ್ದೇಶನ ನೀಡಿದರು.  ಅಕ್ರಮ-ಸಕ್ರಮ ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳ ನ್ಯಾಯಯುತ ವಿಲೇವಾರಿ ಮತ್ತು ಅನಧಿಕೃತ ಸಾಗುವಳಿ ಭೂಮಿಯನ್ನು ಸಕ್ರಮಗೊಳಿಸುವ ಪ್ರಕ್ರಿಯೆ ಶೀಘ್ರವೇ ಮುಗಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read