ರೈತರಿಗೆ ಗುಡ್ ನ್ಯೂಸ್: ನೀರಾವರಿ ಯೋಜನೆಗಳಿಗೆ ಸಂಪುಟ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಂತಿವೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಎಡವಿಹಾಳ ಗ್ರಾಮದ ಬಳಿ ತು೦ಗಭದ್ರಾ ನದಿಯಿ೦ದ ನೀರು ಎತ್ತಿ ಸುಮಾರು 10 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸುವ ₹109 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

ಮಂಡ್ಯ ಜಿಲ್ಲೆಯ ಮಳವಳ್ಳಿ ಮತ್ತು ಮದ್ದೂರು ತಾಲೂಕಿನ ವಿಶ್ವೇಶ್ವರಯ್ಯ ನಾಲಾ ಜಾಲದಡಿಯಲ್ಲಿ ಬರುವ ಹೆಬ್ಬಕ್ಕವಾಡಿ ಶಾಖಾ ನಾಲೆ ಮತ್ತು ನಿಡಘಟ್ಟ ಶಾಖಾ ನಾಲೆಯ ಅಭಿವೃದ್ಧಿ ಕಾಮಗಾರಿಗಳನ್ನು ₹293.47 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

ಮಂಡ್ಯ ಜಿಲ್ಲೆಯ ಕೆ.ಆ‌ರ್.ಪೇಟೆ ತಾಲೂಕಿನ ಹೊಸಹೊಳಲು ಎಡದಂಡೆ ನಾಲೆಯ ಉಳಿಕೆ ಕಾಮಗಾರಿ ಹಾಗೂ ಆಧುನಿಕರಣ ಕಾಮಗಾರಿಯನ್ನು ₹21.50 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಹತ್ತಿರ ಮಲಪ್ರಭಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಮತ್ತು ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಯನ್ನು ₹50 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

ಬೆಂಗಳೂರಿನ ಯಲಹಂಕ ತಾಲೂಕು ಬೆಳ್ಳಹಳ್ಳಿಯಲ್ಲಿ ಮತ್ತು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಕೃಷಿ ಇಲಾಖೆ ಆವರಣದಲ್ಲಿ ತಲಾ ರೂ. 50 ಕೋಟಿಗಳ ಅಂದಾಜು ವೆಚ್ಚದಲ್ಲಿ ಪ್ರತ್ಯೇಕವಾಗಿ 100 ಹಾಸಿಗೆಗಳ ಸಾಮರ್ಥ್ಯದ 2 ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆ ಕಟ್ಟಡಗಳನ್ನು ನಿರ್ಮಿಸಲು ತೀರ್ಮಾನ

ಮ೦ಡ್ಯ ಜಿಲ್ಲೆ ಶ್ರೀರ೦ಗಪಟ್ಟಣ ತಾಲೂಕು ವ್ಯಾಪ್ತಿಯ ಸಿಡಿಎಸ್‌ ನಾಲೆಯಡಿಯಲ್ಲಿ ಬರುವ ಪಿಕಪ್ ಮತ್ತು ತೂಬಿನ ನಾಲೆಗಳ ಅಭಿವೃದ್ಧಿ ಕಾಮಗಾರಿಗಳನ್ನು ರೂ.50 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read