ರೈತರಿಗೆ ಗುಡ್ ನ್ಯೂಸ್: 16 ವರ್ಷದ ನಂತರ ವಾಡಿಕೆಗಿಂತ ಮೊದಲೇ ಮೇ 27ರಂದು ಕೇರಳಕ್ಕೆ ‘ಮಾನ್ಸೂನ್’ ಪ್ರವೇಶ ಸಾಧ್ಯತೆ

ನವದೆಹಲಿ: ಕೇರಳಕ್ಕೆ ನೈರುತ್ಯ ಮಾನ್ಸೂನ್ ಮಳೆ ಮೇ 27ರಂದು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಡಿಕೆಯಂತೆ ಜೂನ್ 1ರಂದು ಕೇರಳಕ್ಕೆ ಮಾನ್ಸೂನ್ ಮಳೆ ಪ್ರವೇಶಿಸಲಿದೆ. ಆದರೆ, ಈ ಬಾರಿ 5 ದಿನ ಮೊದಲೇ ಮುಂಗಾರು ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹವಾಮಾನ ಇಲಾಖೆಯ ದತ್ತಾಂಶದ ಪ್ರಕಾರ 2009ರಲ್ಲಿ ಮೇ 23ರಂದು ಮಳೆ ಪ್ರಾರಂಭವಾಗಿದ್ದು, ಈ ವರ್ಷ ನಿರೀಕ್ಷೆಯಂತೆ ಮೇ 27 ರಂದು ಕೇರಳಕ್ಕೆ ಮಾನ್ಸೂನ್ ಆಗಮಿಸಲಿದೆ. 16 ವರ್ಷದ ನಂತರ ಮೊದಲ ಬಾರಿಗೆ ಭಾರತದ ಮುಖ್ಯ ಭೂಭಾಗದಲ್ಲಿ ಮುಂಗಾರು ಮಾರುತಗಳು ಬೇಗನೆ ಪ್ರವೇಶಿಸಲಿವೆ. ಭಾರತದಲ್ಲಿ ಜೂನ್ ನಿಂದ ಸೆಪ್ಟೆಂಬರ್ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read