ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಬ್ಯಾಂಕ್ ಸಾಲಕ್ಕೆ ಸರ್ಕಾರದಿಂದ ಬಡ್ಡಿ ಸಬ್ಸಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆ ಫಲಾನುಭವಿಗಳಿಗೆ ಸಾಲದ ಬಡ್ಡಿಗೆ ನೆರವು ನೀಡಲು ಸರ್ಕಾರ ಮುಂದಾಗಿದೆ.

ಫಲಾನುಭವಿಗಳು ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲಕ್ಕೆ ಸರ್ಕಾರದಿಂದ ಬಡ್ಡಿ ಸಬ್ಸಿಡಿ ನೀಡಲಾಗುವುದು.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಬೆಂಗಳೂರಿನಲ್ಲಿ ಒಂದು ಲಕ್ಷ ಬಹುಮಾನ ವಸತಿ ಯೋಜನೆ ಫಲಾನುಭವಿಗಳು ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲಕ್ಕೆ ಸರ್ಕಾರದಿಂದಲೇ ಬಡ್ಡಿ ಸಬ್ಸಿಡಿ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read