ಧಾರವಾಡ: ಕೈಗಾರಿಕೆ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಿಡಲು ರಾಜ್ಯ ಸರ್ಕಾರ ಬದ್ಧವಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಹೊಸ ಕೈಗಾರಿಕಾ ನೀತಿಯಲ್ಲಿ ಕರ್ನಾಟಕದಲ್ಲಿ ಘಟಕಗಳನ್ನು ಸ್ಥಾಪಿಸುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪರಿಷ್ಕೃತ ಕೈಗಾರಿಕಾ ನೀತಿಯಡಿ ಕೈಗಾರಿಕೆಗಳು ಗ್ರೂಪ್ ಎ ಮತ್ತು ಬಿ ವರ್ಗಗಳಲ್ಲಿ ಕನ್ನಡಿಗರಿಗೆ ಶೇಕಡ 55 ರಷ್ಟು ಉದ್ಯೋಗಗಳನ್ನು ಕಾಯ್ದಿರಿಸಬೇಕು. ಗ್ರೂಪ್ ಸಿ ಮತ್ತು ಡಿ ವರ್ಗಗಳಲ್ಲಿ ಕನ್ನಡಿಗರಿಗೆ ಶೇಕಡ 75ರಷ್ಟು ಮೀಸಲಾತಿ ಇದೆ. ಕೈಗಾರಿಕೆಗಳು ಈ ಷರತ್ತುಗಳನ್ನು ಒಪ್ಪಿಕೊಂಡು ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸಿವೆ ಎಂದು ಹೇಳಿದ್ದಾರೆ.