ಕಾಶಿ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯ ಕಾಂಗ್ರೆಸ್ ಸರ್ಕಾರದಿಂದಲೂ 5,000 ರೂ. ರಿಯಾಯಿತಿ

 

ಬೆಂಗಳೂರು : ಕಾಶಿ ಯಾತ್ರಾರ್ಥಿಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭಾರತೀಯ ರೈಲ್ವೆ ಇಲಾಖೆ ಹಾಗೂ ಐಆರ್ ಸಿಟಿಸಿ ಸಹಯೋಗದಲ್ಲಿ ರೂಪಿಸಲಾದ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ಯಾತ್ರೆಗೆ ರಾಜ್ಯ ಸರ್ಕಾರವು 5 ಸಾವಿರ ರೂ. ರಿಯಾಯಿತಿ ನೀಡಲಿದೆ.

ಕರ್ನಾಟಕ ಭಾರತ್ ಗೌರವ್ ಕಾಶಿ ಯಾತ್ರೆ ಜುಲೈ 29 ಕ್ಕೆ ಆರಂಭವಾಗಲಿದ್ದು, ವಾರಾಣಸಿ, ಅಯೋಧ್ಯೆ ಮತ್ತು ಪ್ರಯಾಗ್ ರಾಜ್ ಪುಣ್ಯ ಕ್ಷೇತ್ರಗಳಿಗೆ ರಿಯಾಯಿತಿ ದರದಲ್ಲಿ ಪ್ಯಾಕೇಜ್ ರೂಪಿಸಲಾಗಿದ್ದು, ಪ್ರತಿ ಯಾತ್ರಾರ್ಥಿಗೆ 20 ಸಾವಿರ ರೂ. ಪ್ಯಾಕೇಜ್ ನಿಗದಿಪಡಿಸಲಾಗಿದೆ. ಈ ಮೊತ್ತದಲ್ಲಿ ತಲಾ 5 ಸಾವಿರ ರೂ. ರಾಜ್ಯ ಸರ್ಕಾರದ ವತಿಯಿಂದ ಹಾಗೂ ಉಳಿದ 15 ಸಾವಿರ ರೂ.ಗಳನ್ನು ಯಾತ್ರಾರ್ಥಿಗಳು ಪಾವತಿಸಬೇಕಾಗುತ್ತದೆ.

ಕರ್ನಾಟಕ ಭಾರತ್ ಗೌರವ್ ಕಾಶಿ ಯೋಜನೆಯಡಿ ಈವರೆಗೆ ಒಟ್ಟು 3 ಟ್ರಿಪ್ ಪೂರೈಸಿದ್ದು, 1,644 ಯಾತ್ರಾರ್ಥಿಗಳು ಯಾತ್ರೆಗೆ ಹೋಗಿ ಬಂದಿದ್ದಾರೆ. ರಾಜ್ಯ ಸರ್ಕಾರ ತಲಾ 5 ಸಾವಿರ ರೂ. ನಂತೆ 82.20 ಲಕ್ಷ ರೂ. ಸಹಾಯಧನ ನೀಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read