ಹುಬ್ಬಳ್ಳಿ-ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ನೀಡಲಾಗಿದೆ.
ಬಹುದಿನದ ಬೇಡಿಕೆಯಾಗಿದ್ದ ಈ ರೈಲಿಗಾಗಿ ನಾನು ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದೆ. ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗವಾಗಿ ವಾಣಿಜ್ಯ ನಗರಿ ಮುಂಬೈಗೆ ಸಂಚರಿಸಲಿದ್ದು, ಲಕ್ಷಾಂತರ ಜನರಿಗೆ ಈ ರೈಲು ಸಂಚಾರದಿಂದ ಅನುಕೂಲವಾಗಲಿದೆ ಹಾಗೂ ವ್ಯಾಪಾರ ವಹಿವಾಟು ಮತ್ತಷ್ಟು ವೃದ್ಧಿಯಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಈ ಹೊಸ ರೈಲು ಪ್ರಾರಂಭಿಸಲು ಅನುವು ಮಾಡಿಕೊಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಹೋದ್ಯೋಗಿ ಮಿತ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದ ಹೇಳಿದ್ದಾರೆ.
ನಮ್ಮ ಹುಬ್ಬಳ್ಳಿ-ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ಪತ್ರವನ್ನು ನೀಡಿದ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ @AshwiniVaishnaw ಅವರಿಗೆ ಅನಂತ ಧನ್ಯವಾದಗಳು.
— Pralhad Joshi (@JoshiPralhad) October 23, 2025
ನಮ್ಮ ಬಹುದಿನದ ಬೇಡಿಕೆಯಾಗಿದ್ದ ಈ ರೈಲಿಗಾಗಿ ನಾನು ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದೆ. ಈ ಸೂಪರ್ ಫಾಸ್ಟ್… pic.twitter.com/1RbfUDxAvz