GOOD NEWS : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿಸುದ್ದಿ : ಶೀಘ್ರದಲ್ಲೇ 6 ನೇ ವೇತನ ಆಯೋಗ ಜಾರಿ

ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗೃಹ ಸಚಿವ ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ 6 ನೇ ವೇತನ ಆಯೋಗ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ಶೀಘ್ರದಲ್ಲೇ 6 ನೇ ವೇತನ ಆಯೋಗ ಜಾರಿಗೊಳಿಸಲಾಗುತ್ತದೆ. ಪೊಲೀಸ್ ಸಿಬ್ಬಂದಿಗಳಿಗೆ ಸಿಗಬೇಕಾದ ಸರಿಸಮಾನ ವೇತನ, ಭತ್ಯೆ ಸಿಗುವಂತೆ ಮಾಡಲಿದ್ದೇವೆ ಎಂದರು.
ಪೊಲೀಸರಿಗೆ ಬಡ್ತಿ ನೀಡುವ ವಿಚಾರ ಕೆಲವು ನಿಯಮಗಳನ್ನು ಬದಲಾವಣೆ ಮಾಡಬೇಕಾಗಿದೆ, ಅಂತರ್ ವಲಯ ವರ್ಗಾವಣೆಯಿಂದ ಹಿರಿಯ ಅಧಿಕಾರಿಗಳಿಗೆ ತೊಂದರೆ ಆಗುತ್ತಿದ್ದು, ಇದನ್ನು ಶೀಘ್ರದಲ್ಲೇ ಪರಿಹರಿಸಲಾಗುತ್ತದೆ ಎಂದಿದ್ದಾರೆ.

ನಾನು ಸನಾತನ ಧರ್ಮದ ಬಗ್ಗೆ ಮಾತಾಡಿಲ್ಲ. ಬೇರೆಯವರು ಏನೆಲ್ಲಾ ವಿಶ್ಲೇಷಣೆ ಮಾಡ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ. ಏನು ಹೇಳಬೇಕೋ ಅದನ್ನು ಹೇಳಿದ್ದೇನೆ ಎಂದರು. ಬರಗಾಲದ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಿದೆ. ಸಚಿವ ಸಂಪುಟ ಉಪ ಸಮಿತಿಯು ಕೆಲವು ತಾಲೂಕುಗಳನ್ನು ಮಾತ್ರ ಬರ ಪೀಡಿತವೆಂದು ಘೋಷಿಸಲು ಶಿಫಾರಸ್ಸು ಮಾಡಿದೆ. ಶೀಘ್ರದಲ್ಲೇ ಬರಪೀಡಿತ ಪಟ್ಟಿ ಘೋಷಣೆ ಮಾಡಲಾಗುವುದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read