ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಮತ್ತೆ 188 ಹೊಸ `ಇಂದಿರಾ ಕ್ಯಾಂಟೀನ್’ ಸ್ಥಾಪನೆ

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಬಿಬಿಎಂಪಿ ಹೊರತುಪಡಿಸಿ ರಾಜ್ಯತ ಇತರೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ ಮತ್ತೆ 188 ಹೊಸ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಹಾಗೂ ಹಾಲಿ ಇರುವ ಕ್ಯಾಂಟೀನ್ ಗಳ ದುರಸ್ತಿ, ನವೀಕರಣ ಹಾಗೂ ಗುಣಮಟ್ಟ ಉತ್ತಮಪಡಿಸಲು ಒಟ್ಟು 21 ಕೋಟಿ ರೂ. ಅನುದಾನ ಮೀಸಲಿಡಲು ತೀರ್ಮಾನಿಸಲಾಗಿದೆ.

ಬಿಬಿಎಂಪಿ ಹೊರತುಪಡಿಸಿ ಉಳಿದೆಡೆಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಆಯಾ ಭಾಗದ ಸ್ಥಳೀಯ ಆಹಾರಕ್ಕೆ ಆಧ್ಯತೆ ನೀಡಿ ಮೆನು ಬದಲಿಸುವುದು, ಮೆನುವಿನಲ್ಲಿ ಸಿಹಿ ಹಾಗೂ ಎರಡು ರೀತಿಯ ಪಲ್ಯ ಸೇರಿಸಲು ತೀರ್ಮಾನಿಸಲಾಗಿದೆ.

 ಒಂದು ಊಟದ ಬೆಲೆ ಇಂದಿರಾ ಕ್ಯಾಂಟೀನ್ ನಲ್ಲಿ 57 ರಿಂದ 62 ರೂಪಾಯಿಗೆ ಏರಿಕೆ ಆಗಲಿದೆ. ಈ ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದ್ದು, ಸಾರ್ವಜನಿಕರಿಗೆ ಎಂದಿನಂತೆ ಬೆಳಗಿನ ತಿಂಡಿ 5 ರೂ. ಮಧ್ಯಾಹ್ನದ ಊಟ 10 ರೂ. ಹಾಗೂ ರಾತ್ರಿ ಊಟ 10 ರೂ.ಗಳಿಗೆ ಲಭ್ಯವಾಗಲಿದೆ ಎಂದು ತಿಳಿದುಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read