GOOD NEWS : ರಾಜ್ಯ ಸರ್ಕಾರದಿಂದ ತಾಲ್ಲೂಕು ಪಂಚಾಯತಿ ನೌಕರರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ಅನುದಾನ ಬಿಡುಗಡೆ.!

ಬೆಂಗಳೂರು : ರಾಜ್ಯ ಸರ್ಕಾರ ತಾಲ್ಲೂಕು ಪಂಚಾಯತಿ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದು, ವೇತನ ಪಾವತಿಗೆ ಅನುದಾನ ಬಿಡುಗಡೆ ಮಾಡಿದೆ.

ವಿವಿಧ ತಾಲ್ಲೂಕು ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ವೇತನ ವೇತನೇತರ ಹೊರಗುತ್ತಿಗೆ ನೌಕರರ ವೇತನ ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.

ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಪ್ರಧಾನ ಲೆಕ್ಕ ಶೀರ್ಷಿಕೆ 2202, 2210, 2225, 2401, 2403, 2435 ಮತ್ತು 2515ರಡಿ ಬಿಡುಗಡೆಗೊಳಿಸಲು ಪ್ರಸ್ತಾಪಿಸಿದೆ.ಪ್ರಸ್ತಾವನೆಯನ್ನು ಪರಿಶೀಲಿಸಿ, ತಾಲ್ಲೂಕು ಪಂಚಾಯತ್ ಕಾರ್ಯಕ್ರಮದಡಿ ರೂ.2819.45ಲಕ್ಷಗಳನ್ನು ಲೆಕ್ಕ ಶೀರ್ಷಿಕೆ 2515-00-197-1-10-300ರಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಈ ಕೆಳಕಂಡಂತೆ ಆದೇಶಿಸಿದ.

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅಗತ್ಯವಿರುವ ಅನುದಾನವನ್ನು ಕಾಲಂ 4ರ ಲೆಕ್ಕ, ಶೀರ್ಷಿಕೆಯಡಿ ರೂ.2819.45ಲಕ್ಷ (ರೂಪಾಯಿ ಎರಡು ಸಾವಿರದ ಎಂಟು ನೂರ ಹತ್ತೊಂಬತ್ತು ಲಕ್ಷದ ನಲವತ್ತೈದು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read