GOOD NEWS : ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕಾರ್ಮಿಕ ಇಲಾಖೆಯು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಲ್ಯಾಣ ಯೋಜನೆಯಡಿ 2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಪ್ರೌಢ ಶಾಲಾಯಿಂದ ಸ್ನಾತಕೋತ್ತರ ಪದವಿಯವರಿಗೆ ಹಾಗೂ ವೈದ್ಯಕೀಯ/ಇಂಜಿಯಿಯರಿಗ್ ವ್ಯಾಸಂಗ ಮಾಡುತ್ತಿರುವ ಹಾಗೂ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ. 50 ರಷ್ಟು, ಪ.ಜಾ/ಪ.ಪಂ ಶೇ. 45% ರಷ್ಟು ಅಂಕ ಪಡೆದು ತೇರ್ಗಡೆಯೊಂದಿರುವ ಮತ್ತು ಕಾರ್ಮಿಕನ ಮಾಸಿಕ ವೇತನ ರೂ. 35,000/- ಗಳಿಗಿಂತ ಕಡಿಮೆಯಿರುವ ಜಿಲ್ಲೆಯ ಸಂಘಟಿತ ಕಾರ್ಮಿಕರ ಇಬ್ಬರು ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಮಂಡಳಿಯ ವೆಬ್‌ಸೈಟ್ www.klwbapps.karnataka.gov.in ರಲ್ಲಿ ದಿ: 31/12/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ. 48, 1 ಮತ್ತು 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂ.ಸಂ.: 080-23475188/ 8277291175/ 8277120505 ಮೂಲಕ ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read