ವಿಕಲಚೇತನರಿಗೆ ಗುಡ್ ನ್ಯೂಸ್ : ತ್ರಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಕುಡತಿನಿ ಪಟ್ಟಣ ಪಂಚಾಯಿತಿ ವತಿಯಿಂದ 2021-22ನೇ ಸಾಲಿನ ಎಸ್ಎಫ್ಸಿ ಮುಕ್ತನಿಧಿ ಯೋಜನೆಯ ಉಳಿತಾಯ ಮೊತ್ತದಡಿ ಪಟ್ಟಣ ಪಂಚಾಯಿತಿ ನಿಧಿಯಲ್ಲಿ ಶೇ.5 ರ ವೈಯಕ್ತಿಕ ಸೌಲಭ್ಯಕ್ಕಾಗಿ ಕಾಯ್ದಿರಿಸಿದ ಅನುದಾನದಡಿ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಕುಡತಿನಿ ಪಟ್ಟಣ ಪಂಚಾಯಿತಿ ಕಚೇರಿಯಿಂದ ಅರ್ಜಿ ಪಡೆದು ಎಲ್ಲಾ ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ಅರ್ಜಿ ಭರ್ತಿ ಮಾಡಿ ಫೆ.12 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯಿತಿ ಕಾರ್ಯಾಲಯ ಕುಡಿತಿನಿ ಕಚೇರಿಗೆ ಸಂಪಕಿಸಬಹುದು ಎಂದು ಕುಡತಿನಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read