BREAKING : ‘ಬರ’ ಸಂಕಷ್ಟದಲ್ಲಿದ್ದ ರೈತರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 324 ಕೋಟಿ ರೂ. ಪರಿಹಾರ ಬಿಡುಗಡೆ

ಬೆಂಗಳೂರು : ‘ಬರ’ ಸಂಕಷ್ಟದಲ್ಲಿದ್ದ ರೈತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ 324 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದೆ.

ಎಸ್ ಡಿ ಆರ್ ಎಫ್ ಅಡಿಯಲ್ಲಿ 324 ಕೋಟಿ ರೂ. ಬರ ಪರಿಹಾರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ 384 ಕೋಟಿ ರೂ. ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಮಳೆಯಾಗದಿರುವ ಹಿನ್ನೆಲೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಬರ ಎದುರಾಗಿದೆ. ಹೊಲ ಗದ್ದೆಗಳಿಗೆ ನೀರು ಇಲ್ಲದೇ ಬೆಳೆಗಳು ಒಣಗಿ ನಿಂತಿದೆ. ಇತ್ತೀಚೆಗೆ ಕೇಂದ್ರ ಬರ ಅಧ್ಯಯನ ತಂಡ ಬರ ಪೀಡಿತ ತಾಲೂಕುಗಳಿಗೆ ಭೇಟಿ ನೀಡಿ ಅಲ್ಲಿನ ರೈತರ ಸಮಸ್ಯೆ ಹಾಗೂ ಬೆಳೆ ಸಮೀಕ್ಷೆಯನ್ನು ಪರಿಶೀಲನೆ ನಡೆಸಿತ್ತು. ಇದೀಗ ರಾಜ್ಯದ ರೈತರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದ್ದು, ರಾಜ್ಯ ಸರ್ಕಾರ 324 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read