KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಈ ದಿನ ಖಾತೆಗೆ 2,000 ರೂ. ಬೆಳೆ ನಷ್ಟ ಪರಿಹಾರ ಜಮಾ

Published December 7, 2023 at 5:27 am
Share
SHARE

ಬೆಳಗಾವಿ : ಬರದಿಂದ ತತ್ತರಿಸಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈಗಾಗಲೇ ಘೋಷಿಸಿರುವ 2,000 ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ರೈತರ ಖಾತೆಗೆ ಜಮಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರೈತರಿಗೆ ಮೊದಲ ಹಂತದಲ್ಲಿ 2,000 ರೂ. ವರೆಗೆ ನೀಡಲು ಘೋಷಿಸಿರುವ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ ಡಿಬಿಟಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳಬೇಕು.

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕೆಲಸ ಮುಂದುವರೆಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿರುವ, ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಂಕಿ-ಅಂಶಗಳ ಸಹಿತ ಒದಗಿಸಬೇಕು.

ರೈತರಿಗೆ ಮೊದಲ ಹಂತದಲ್ಲಿ 2,000 ರೂ. ವರೆಗೆ ಪರಿಹಾರ ಘೋಷಿಸಲಾಗಿದ್ದು, ಈ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿ.ಬಿ.ಟಿ. ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರ ಸಮರ್ಪಕವಾಗಿ ನಡೆಯಲು ಅಧಿಕಾರಿಗಳ ಪಾತ್ರ ಬಹುಮುಖ್ಯ. ನೀವು ಸರ್ಕಾರದ ಕಣ್ಣು, ಕಿವಿ ಇದ್ದಹಾಗೆ‌. ರಾಜಕಾರಣಿಗಳು, ಅಧಿಕಾರಿಗಳು ನಾವೆಲ್ಲರೂ ಜನರಿಗೋಸ್ಕರ ಇರುವುದು. ಜನರ ಕೆಲಸವನ್ನು ವೇಗವಾಗಿ ಮಾಡಬೇಕು ಎಂದು ಹೇಳಿದ್ದಾರೆ.

ಆಯವ್ಯಯ ಭಾಷಣದಲ್ಲಿ 143 ಘೋಷಣೆಗಳನ್ನು ಮಾಡಲಾಗಿದ್ದು, ಇದರಲ್ಲಿ ಈಗಾಗಲೇ 83 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಿ, ಕಾರ್ಯಗತಗೊಳಿಸಲಾಗಿದೆ. ಉಳಿದ ಘೋಷಣೆಗಳನ್ನೂ ಶೀಘ್ರವೇ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳಬೇಕು ಸೂಚನೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಇನ್ನೂ ಸೌಲಭ್ಯ ದೊರಕದ ಅರ್ಹ ಕೆಲವು ಫಲಾನುಭವಿಗಳಿಗೆ ಸೌಲಭ್ಯ ದೊರಕಲು ಇರುವ ತಾಂತ್ರಿಕ ಅಡಚಣೆಗಳನ್ನು ಶೀರ್ಘವೇ ನಿವಾರಿಸಬೇಕು. ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಚಿವರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ.

ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಸಚಿವ ಸಂಪುಟ ಸಭೆಯಲ್ಲಿಯೂ ಬಾಕಿ ಕಡತಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗುವುದು. ವಿವಿಧ ಇಲಾಖೆಗಳಲ್ಲಿ ನ್ಯಾಯಾಲಯ ಉಲ್ಲಂಘನೆಯ ಪ್ರಕರಣಗಳನ್ನು ಅಡ್ವೊಕೇಟ್‌ ಜನರಲ್‌ ಜೊತೆ ಚರ್ಚಿಸಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಜನಸಂಪರ್ಕ ಸಭೆ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ಅನಿವಾರ್ಯ ಸಂದರ್ಭಗಳನ್ನು ಹೊರತು ಪಡಿಸಿ, ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ ಬರೆಯಬೇಕು. ಕನ್ನಡ ನಮ್ಮ ರಾಜ್ಯ ಭಾಷೆ, ಸಾರ್ವಭೌಮ ಭಾಷೆ ಎಂದು ಹೇಳಿದ್ದಾರೆ.

ತೆರಿಗೆ ಸಂಗ್ರಹ ಇಲಾಖೆಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ತೆರಿಗೆಯೇತರ ರಾಜಸ್ವ ಸಂಗ್ರಹ ಹೆಚ್ಚಳ ಮಾಡುವ ಬಗ್ಗೆ ಆಡಳಿತ ಸುಧಾರಣಾ ಆಯೋಗ-2 ಮಾಡಿರುವ ಶಿಫಾರಸುಗಳನ್ನು ಎಲ್ಲ ಕಾರ್ಯದರ್ಶಿಗಳು ಅಧ್ಯಯನ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

You Might Also Like

BREAKING: ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ: ಪರಿಸ್ಥಿತಿ ಉದ್ವಿಗ್ನ

‘ಬಂಟಿ ಔರ್ ಬಬ್ಲಿ’ ಸಿನಿಮಾದಿಂದ ಪ್ರೇರಿತರಾಗಿ ನಿರ್ದೇಶಕರು, ನಿರ್ಮಾಪಕರ ಹೆಸರಲ್ಲಿ ವಂಚನೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಲಾಡ್ಜ್ ಗೆ ಬಾಲಕಿ ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರಿಗೆ 10 ವರ್ಷ ಜೈಲು

ಆ. 25 ರಿಂದ ಅಮೆರಿಕಕ್ಕೆ ಹೋಗುವ ಪಾರ್ಸೆಲ್‌ ಸ್ಥಗಿತ: ಭಾರತ ಅಂಚೆ ಇಲಾಖೆ ಘೋಷಣೆ

BREAKING: ನಮ್ಮ ಹೋರಾಟ ಮುಂದುವರೆಯಲಿದೆ: ಜಾಮೀನು ದೊರೆತ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿ ಪ್ರತಿಕ್ರಿಯೆ

TAGGED:Karnatakaಕರ್ನಾಟಕರೈತರುFarmersಬರಪರಿಹಾರdrought reliefಖಾತೆಗೆ ಜಮಾcredited to account
Share This Article
Facebook Copy Link Print

Latest News

BREAKING: ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ: ಪರಿಸ್ಥಿತಿ ಉದ್ವಿಗ್ನ
‘ಬಂಟಿ ಔರ್ ಬಬ್ಲಿ’ ಸಿನಿಮಾದಿಂದ ಪ್ರೇರಿತರಾಗಿ ನಿರ್ದೇಶಕರು, ನಿರ್ಮಾಪಕರ ಹೆಸರಲ್ಲಿ ವಂಚನೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್
ಲಾಡ್ಜ್ ಗೆ ಬಾಲಕಿ ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರಿಗೆ 10 ವರ್ಷ ಜೈಲು
ಆ. 25 ರಿಂದ ಅಮೆರಿಕಕ್ಕೆ ಹೋಗುವ ಪಾರ್ಸೆಲ್‌ ಸ್ಥಗಿತ: ಭಾರತ ಅಂಚೆ ಇಲಾಖೆ ಘೋಷಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ಭಯಾನಕ ಅಪಘಾತ: ಆಲ್ಟೋ ಕಾರ್ 5 ಬಾರಿ ಪಲ್ಟಿ – ಪವಾಡಸದೃಶ್ಯ ರೀತಿಯಲ್ಲಿ ಪ್ರಯಾಣಿಕರು ಪಾರು | Watch Video
ಭಾರತದ ಮೊದಲ ʼಎಲೆಕ್ಟ್ರಿಕ್‌ʼ ಕಾರಿನ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ !
BIG NEWS : ‘ದ್ವಿಚಕ್ರ ವಾಹನ ಸವಾರ’ರಿಗೆ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟೋಲ್ ತೆರಿಗೆ’ ಪಾವತಿ ಕಡ್ಡಾಯ.!

Entertainment

500 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರೂ ಬಡತನ ; ಪ್ರಸಿದ್ಧ ನಟನ ನೋವಿನ ಕಥೆ ಬಿಚ್ಚಿಟ್ಟ ಮಗ !
BREAKING :’ಕಾಂತಾರ- 1′ ಚಿತ್ರದಲ್ಲಿ ನಟ ರಿಷಬ್ ಶೆಟ್ಟಿಗೆ ಜೋಡಿಯಾದ ನಟಿ ರುಕ್ಮಿಣಿ ವಸಂತ್ : ‘ಕನಕವತಿ’ ಫಸ್ಟ್ ಲುಕ್ ರಿಲೀಸ್.!
BIG NEWS : ಸಾಹಸ ಸಿಂಹ, ನಟ ವಿಷ್ಣುವರ್ಧನ್ ನಟನೆ ಹೀಯಾಳಿಸಿದ ‘ತಮಿಳು ಯೂಟ್ಯೂಬರ್’ : ಭುಗಿಲೆದ್ದ ಕನ್ನಡಿಗರ ಆಕ್ರೋಶ |WATCH VIDEO

Sports

BREAKING: ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್: ಸೆ. 14ರಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್
BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL

Special

ಗಮನಿಸಿ : ‘ರೈಲ್ವೆ ಹಳಿ’ಗಳ ಪಕ್ಕದಲ್ಲಿ ಬರೆಯಲಾದ C/FA, W/L ಎಂದರೇನು ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ
ಮನೆಯಲ್ಲೇ ಸುಲಭವಾಗಿ ಮಾಡಿ ಮಸಾಲ ಚಾಯ್
ಆಹಾರಕ್ಕೆ ಅಮೋಘ ರುಚಿ ನೀಡುವ, ಔಷಧೀಯ ಗುಣ ಹೊಂದಿರುವ ಕೊತ್ತಂಬರಿ ಸೊಪ್ಪು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?