ರಾಜ್ಯದ ಜನತೆಗೆ ಗುಡ್ ನ್ಯೂಸ್: 10 ವಂದೇ ಭಾರತ್ ರೈಲು ಸಂಚಾರ ಆರಂಭ ಶೀಘ್ರ: ಶಿವಮೊಗ್ಗ –ಬೀರೂರು ಮಾರ್ಗ ಡಬ್ಲಿಂಗ್

ಚಿಕ್ಕಮಗಳೂರು: ರಾಜ್ಯಕ್ಕೆ 10 ವಂದೇ ಭಾರತ್ ರೈಲುಗಳು ಶೀಘ್ರವೇ ಬರಲಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಚಿಕ್ಕಮಗಳೂರು ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಚಿಕ್ಕಮಗಳೂರು -ತಿರುಪತಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿ, 1000 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಪ್ರಮುಖ ರೈಲು ನಿಲ್ದಾಣಗಳನ್ನು ಮೆಲ್ದರ್ಜೆಗೇರಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಬೀರೂರು -ಶಿವಮೊಗ್ಗ ಡಬ್ಲಿಂಗ್ ಕಾರ್ಯ ಶೀಘ್ರವೇ ಆರಂಭವಾಗಲಿದೆ. ಹಾಸನ –ಬೇಲೂರು- ಚಿಕ್ಕಮಗಳೂರು ರೈಲ್ವೆ ಮಾರ್ಗ ಇನ್ನೆರಡು ವರ್ಷದೊಳಗೆ ಮುಕ್ತಾಯವಾಗಲಿದ್ದು, ಚಿಕ್ಕಮಗಳೂರಿಗೆ ಹೆಚ್ಚಿನ ರೈಲುಗಳು ಸಂಚರಿಸುತ್ತವೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read