ಹುಬ್ಬಳ್ಳಿ: ಮೂರು ತಿಂಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಕೇಂದ್ರೀಕೃತ ಅಧಿಕಾರದ ಪರವಾಗಿದ್ದರಿಂದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಿಲ್ಲ. ಬಿಜೆಪಿಯವರು ಸೃಷ್ಟಿಸಿದ ಗೊಂದಲ ನಿವಾರಿಸುವುದಕ್ಕಾಗಿಯೇ ಚುನಾವಣೆ ವಿಳಂಬವಾಗಿದೆ. ಈಗ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ
ಮೂರು ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಿದ್ದು, ಎಂಟು ತಿಂಗಳ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.