ಬೆಂಗಳೂರು : 25 % ವೇತನ ಹೆಚ್ಚಳ ( Salary Hike ) ಮಾಡುವಂತೆ ಸಾರಿಗೆ ನೌಕರರು ಪಟ್ಟು ಹಿಡಿದಿದ್ದು, ಪ್ರತಿಭಟನೆ ಮಂದಾಗಿದೆ.
ಈ ಹಿನ್ನೆಲೆ ಇಂದು ಸಂಜೆ 5 ಗಂಟೆಗೆ ಸಾರಿಗೆ ನೌಕರರ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ( CM Siddaramaiah) ಹೈವೋಲ್ಟೇಜ್ ಸಭೆ ನಡೆಸಲಿದ್ದು, ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಸಿಗುತ್ತಾ ಕಾದುನೋಡಬೇಕಾಗಿದೆ.
ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದಂತೆ ಅಲರ್ಟ್ ಆದ ರಾಜ್ಯ ಸರ್ಕಾರ ಸಾರಿಗೆ ನೌಕರರ ಮನವಿ ಆಲಿಸಿ ಭರವಸೆ ಈಡೇರಿಸಲು ಮುಂದಾಗಿದೆ. ಈ ಹಿನ್ನೆಲೆ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಿಗುತ್ತಾ ಗ್ರೀನ್ ಸಿಗ್ನಲ್ ಎಂಬುದನ್ನು ಕಾದು ನೋಡಬೇಕಾಗಿದೆ. ಇಂದು ಸಭೆ ನಡೆಸಿ ಸಿಎಂ ಸಾರಿಗೆ ನೌಕರರ ಮನವಿ ಆಲಿಸಲಿದ್ದಾರೆ.
TAGGED:ಸಾರಿಗೆ ನೌಕರ