ನೇಕಾರರಿಗೆ ಭರ್ಜರಿ ಗುಡ್ ನ್ಯೂಸ್ : ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

 

ಧಾರವಾಡ : ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಮುದ್ರಾ ಯೋಜನೆಯಡಿ, ಕೈಮಗ್ಗ ನೇಕಾರಿಕೆಯಲ್ಲಿ ತೊಡಗಿರುವ ಅಸಂಘಟಿತ ಕೈಮಗ್ಗ ನೇಕಾರರು ತಮ್ಮ ನೇಕಾರಿಕೆಗೆ ಉದ್ಯೋಗಕ್ಕಾಗಿ ಸಾಲವನ್ನು ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕುಗಳಿಂದ ರಿಯಾಯತಿ ಬಡ್ಡಿ ದರದಲ್ಲಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ನೇಕಾರಿಕೆಯಲ್ಲಿ ತೊಡಗಿಕೊಂಡಿರುವ ಅಸಂಘಟಿತ ಕೈಮಗ್ಗ ನೇಕಾರರು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಅಕ್ಟೋಬರ್ 26 ರೊಳಗಾಗಿ ಅರ್ಜಿ ಸಲ್ಲಿಸಬೇಕು. ತಾವು ಉದ್ಯೋಗ ಕೈಗೊಂಡ ಸ್ಥಳದ ವ್ಯಾಪ್ತಿಯಲ್ಲಿರುವ ಬ್ಯಾಂಕುಗಳಿಗೆ ಅರ್ಜಿಯನ್ನು ಯೋಜನೆಯ ಮಾರ್ಗಸೂಚಿಯನ್ವಯ ಶಿಫಾರಸ್ಸು ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಪೂರ್ವ ದ್ವಾರ, ಮಿನಿವಿಧಾನ ಸೌಧ, ಧಾರವಾಡ, ದೂರವಾಣಿ ಸಂಖ್ಯೆ:0836-2448834 ಸಂಪರ್ಕಿಸಬಹುದೆಂದು ಕಚೇರಿಯ ಪ್ರಕಟಣೆ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read