ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ : ಉಚಿತ ಲ್ಯಾಪ್ಟಾಪ್ ಪಡೆಯಲು ಆರ್ಜಿ ಆಹ್ವಾನ

 

ರಾಜ್ಯಸರ್ಕಾರವು ಕಾರ್ಮಿಕರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಕಾರ್ಮಿಕ ಇಲಾಖೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಕಾರ್ಮಿಕ ಅಧಿಕಾರಿ, ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, ಮಕ್ಕಳ ಆಧಾರ್ ಕಾರ್ಡ್, ವ್ಯಾಸಂಗ ದೃಢೀಕರಣ ಪತ್ರ, ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ, ಇದುವರೆಗೆ ಯಾವುದೇ ಯೋಜನೆಯಡಿ ಲ್ಯಾಪ್‍ಟಾಪ್ ಪಡೆಯದಿರುವ ಬಗ್ಗೆ ಸ್ವಯಂದೃಢೀಕೃತ ಪತ್ರ ಇವುಗಳನ್ನು ಲಗತ್ತಿಸಿ ಸೆ.15 ರೊಳಗಾಗಿ ಇಲಾಖಾ ಕಚೇರಿಗೆ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿ ದೂ.ಸಂ.: 08182-248940ನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read