ಬೆಂಗಳೂರು; ಕಾರ್ಮಿಕರ ರಾಜ್ಯ ವಿಮಾ ನಿಗಮ(ಇಎಸ್ಐಸಿ) ಚಂದಾದಾರರು ಮತ್ತು ಅವರ ಕುಟುಂಬ ಸದಸ್ಯರು ಖಾಸಗಿ ಆಸ್ಪತ್ರೆಗಳಲ್ಲೂ ನಗದುರಹಿತ ಚಿಕಿತ್ಸೆ ಪಡೆಯಬಹುದಾಗಿದೆ.
ಕೇಂದ್ರ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಮಾಹಿತಿ ನೀಡಿದ್ದು, ಇಎಸ್ಐಸಿ ಚಂದಾದಾರರು ಹಾಗೂ ಅವರ ಕುಟುಂಬದವರು ಆಯುಷ್ಮಾನ್ ಆರೋಗ್ಯ ಯೋಜನೆ ಅಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ಸೌಲಭ್ಯ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಎಲ್ಲ ಜಿಲ್ಲೆಗಳಲ್ಲಿಯೂ ಇಎಸ್ಐ ಆಸ್ಪತ್ರೆ ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ, ತಜ್ಞ ವೈದ್ಯರ ಕೊರತೆ ಇರುವುದರಿಂದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿಯೂ ಇಎಸ್ಐಸಿ ಚಂದಾದಾರರು ನಗದು ರಹಿತ ಚಿಕಿತ್ಸೆ ಪಡೆದುಕೊಳ್ಳಬಹುದು. ಚಿಕಿತ್ಸೆಯ ವೆಚ್ಚವನ್ನು ಕಾರ್ಮಿಕರ ರಾಜ್ಯ ವಿಮಾ ನಿಗಮ ಭರಿಸಲಿದೆ. ಈ ಕುರಿತು ನಿಯಮಗಳಲ್ಲಿ ಶೀಘ್ರವೇ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.